Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...
ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
Copyright © 2026 Bayalu