Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ದೇಹ ದೇವಾಲಯ
ದೇಹ ದೇವಾಲಯ
June 12, 2025
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
Copyright © 2026 Bayalu