Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ನಿಲುಗಡೆಯಿಲ್ಲದ ಪಯಣ…
ನಿಲುಗಡೆಯಿಲ್ಲದ ಪಯಣ…
September 6, 2026
ಮನವೇ ಮನವೇ…
ಮನವೇ ಮನವೇ…
May 6, 2020
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
Copyright © 2026 Bayalu