Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕಾಯದೊಳಗಣ ಬಯಲು
Share:
Poems November 7, 2020 ಜ್ಯೋತಿಲಿಂಗಪ್ಪ

ಕಾಯದೊಳಗಣ ಬಯಲು

ಈ ಬಯಲು ಗುರುತಿಸಲಾರೆ
ನನ್ನ ಕಣ್ಣ ಎದುರು ನಾನು
ಬಯಸುವ ರೂಹು ಇಲ್ಲ

ಕಣ್ಣು ಹೇಳಿದುದು ಸುಳ್ಳೇ

ನೀ ಬಿಟ್ಟ ಉಸಿರಲೊಂದು
ದನಿ ಇದೆ ನಾ ಕೇಳಲಾರೆ

ಉಸಿರು ಒಳಗಣ ದನಿ
ಉಸಿರು ನುಂಗಿತು
ಕಣ್ಣ ಒಳಗಣ ಉಸಿರು
ನೋಟ ನುಂಗಿತು

ಈ ಗೆರೆ ಕೊರೆದು
ಹೋದವರು ಯಾರು ಯಾರು
ಅಳಿಸದಾ ಗೆರೆಯೇ…

ನಾನು ನಾನೇ ಕೊರೆದುದು ಅಳಿಸದುದು
ನಾ ಹೆತ್ತ ಕೂಸು
ತಾಯಿ ಆಗದಿರೆ ಗಂಡನಿಗೆ ಕಳಂಕ

ಕಾಯ ಉಸಿರು, ಉಸಿರು ಕಾಯ
ಪ್ರಾಣ ಇರುವ ದೇಹ
ದೇಹ ಇರುವ ಪ್ರಾಣ
ಉಸಿರ ಒಳಗಣ ಆ ಸದ್ದು
ಏನದು…

ಒಂದೊಂದು ಕಾಯದಲೂ
ಒಂದು ಚೈತನ್ಯ ಎಂಬರಿವು ಈಗ
ಈಗ ಈ ಐನಸ್ಟೈನ್ ಚೈತನ್ಯ
ಸೂತ್ರ ಬಯಲು

ಬಾಗಿಲಿಗೆ ಮೊಳೆ ಜಡಿದು
ಒಳಗೆ ಕಾಲಿಟ್ಟಿರುವೆ.

Previous post ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
Next post ಗಂಟಿನ ನಂಟು
ಗಂಟಿನ ನಂಟು

Related Posts

ಸುಮ್ಮನೆ ಇರು
Share:
Poems

ಸುಮ್ಮನೆ ಇರು

December 6, 2020 ಜ್ಯೋತಿಲಿಂಗಪ್ಪ
ನಾನು ನೋಡಿದ್ದೇನು ಕೇಳಿದ್ದೇನು ಬಿಡು ನಾನಿರುವುದೇ ಹೀಗೆ ನೋಡೆ ಕೇಳೆ ಕಣ್ಣ ಕೊಳೆ ಕಿವಿಯ ಕಸ ತೊಳೆ ಇರುವೆ ಇರುವ ಹಾಗೆ ನಿನ್ನ ಬೆಳಕಲಿ ನನ್ನ ನೆಳಲ ತುಂಬದಿರು ಕೇಡು ನನದಲ್ಲ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 2

  1. Umesh Patri
    Nov 11, 2020 Reply

    ಕಣ್ಣು ಹೇಳುವುದು ಸುಳ್ಳೋ, ಮನಸ್ಸು ಹೇಳುವುದು ಸುಳ್ಳೋ… ಕೊನೆಗೆ ಈ ಬದುಕೇ ಸುಳ್ಳೋ… ಕವಿಯ ಗೊಂದಲ ಬಿಡುಗಡೆಯಾದರೂ ಓದುಗನ ಗೊಂದಲ ಹಾಗೇ ಉಳಿಯುತ್ತದೆ.

  2. Manikanta Dogila
    Nov 11, 2020 Reply

    ಪ್ರಾಣ ಇರುವ ದೇಹ
    ದೇಹ ಇರುವ ಪ್ರಾಣ… ಕಾಡುವ ಸಾಲುಗಳು.

Leave a Reply to Manikanta Dogila Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಕಾದಿ ಗೆಲಿಸಯ್ಯ ಎನ್ನನು
ಕಾದಿ ಗೆಲಿಸಯ್ಯ ಎನ್ನನು
April 29, 2018
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು
April 5, 2026
Copyright © 2026 Bayalu