Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕುರುಹೇ ಬಯಲು
Share:
Poems February 16, 2026 ಜ್ಯೋತಿಲಿಂಗಪ್ಪ

ಕುರುಹೇ ಬಯಲು

ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು

ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು

ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ
ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ

ಕೆರೆಯ ದಡದ ನೀರ ಅಂಚಿನಲಿ ಕಾಯುವ ಹಕ್ಕಿ
ಹಸಿವು ಇಲ್ಲದೆ ಹಾರೀತೇ…

ಕಂಬದ ಮೇಲೆ ಕುಳಿತಿದೆ ಹದ್ದು

ಕಣ್ಣ ಹಸಿವಿಗೆ ಕಂಡ ಕಂಡ ಕುರುಹುಗಳೆಲ್ಲಾ ದೇವರೇ
ತೀಡಬಲ್ಲೆನೇ ಈ ಕುರುಹುವಿನ ಡೊಂಕು

ಕಾಯದ ಹಸಿವಿಗೆ ಅನ್ನವೇ ಕುರುಹು
ಕಣ್ಣ ಹಸಿವಿಗೆ ಈ ದೇವರೇ ಅನ್ನ

ಈ ನೆಲಕಂಟದ ಬಯಲಿಗೆ ಕುರುಹೇ …
ಈ ಬಯಲಿಗಂಟಿರುವ ನೆಲಕೆ ಕುರುಹೇ ಬಯಲು.

Previous post ಗಜಲ್…
ಗಜಲ್…
Next post ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Comments 3

  1. ಭಾಗ್ಯಾ ವಿಜಯ್
    Feb 19, 2026 Reply

    ಕವನದ ಒಂದೊಂದು ಸಾಲೂ ಒಂದೊಂದು quotes ಇದ್ದ ಹಾಗಿವೆ. ಓದಲು ಏನೋ ಸೊಗಸು, ಅರ್ಥ ಬಲು ಆಳ.

    • GH JYOTILINGAPPA
      Feb 24, 2026 Reply

      ನಿಮ್ಮ ಓದಿಗೆ ಧನ್ಯವಾದಗಳು

  2. ಸುರೇಶ್ ಬಾಬು
    Feb 24, 2026 Reply

    ಕುರುಹನ್ನು, ಅರುಹನ್ನು ಎರಡನ್ನೂ ಬಯಲಾಗಿಸಿದ ಶರಣರ ಸಾರ ಈ ಕವನದಲ್ಲಿದೆ.🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
Copyright © 2026 Bayalu