Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಂಟಿನ ನಂಟು
Share:
Poems November 7, 2020 ಕೆ.ಆರ್ ಮಂಗಳಾ

ಗಂಟಿನ ನಂಟು

ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ
ನೂಲುವಾಗ ಗೊತ್ತಾಗಲೇ ಇಲ್ಲ
ಎಂಥ ಸಿಕ್ಕುಗಳು ಅಂತೀರಿ!
ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು

ಅಹಮಿಕೆಗೆ ಆಕ್ರೋಶದ ಗಂಟು
ಆಕ್ರೋಶಕೆ ಮದದ ಗಂಟು
ಮದಕೆ ಸೊಕ್ಕಿನ ಗಂಟು
ಸೊಕ್ಕಿಗೆ ತಿರಸ್ಕಾರದ ಗಂಟು
ತಿರಸ್ಕಾರಕ್ಕೆ ಸೇಡಿನ ಗಂಟು
ಸೇಡಿಗೆ ಭಾವದ ಗಂಟು
ಭಾವಕೆ ನಿರೀಕ್ಷೆಯಾ ಗಂಟು
ನಿರೀಕ್ಷೆಗೆ ಪ್ರೇಮದ ಗಂಟು
ಪ್ರೇಮಕೆ ಕಾಮದ ಗಂಟು
ಕಾಮಕ್ಕೆ ಬಯಕೆಯ ಗಂಟು
ಬಯಕೆಗೆ ಆಸೆಯ ಗಂಟು…
ಎಡಕ್ಕೆ ಬಲದ ಗಂಟು
ದ್ವೈತಕ್ಕೆ ಅದ್ವೈತದ ಗಂಟು
ಅಸ್ತಿತ್ವಕೆ ನಾಸ್ತಿತ್ವದ ಗಂಟು
ಮಾತಿಗೆ ಪ್ರತಿಮಾತಿನ ಗಂಟು
ಭಾವಗಳಿಗೆ ನಂಬಿಕೆಯ ಗಂಟು
ನಂಬಿಕೆಗಳಿಗೆ ಅಹಮಿಕೆಯ ಗಂಟು
ನಾನೆಂಬುದಕೆ ನನ್ನದೆಂಬ ಗಂಟು
ಕಾರಣಕ್ಕೆ- ಪ್ರತಿಕಾರಣದ ಗಂಟು…
ಹೀಗೆ ಹಾಕುತ್ತಲೇ ಹೋಗಿದ್ದೇನೆ ಗಂಟಿಗೆ ಗಂಟು

ಈ ಗಂಟುಗಳೇ
ನಡೆವ ದಾರಿಯಲಿ ಮುಳ್ಳಾದವು
ಹೃದಯಗಳ ನಡುವೆ ಬೆಟ್ಟಗಳಾದವು
ಸಂಬಂಧಗಳಲ್ಲಿ ಕಣಿವೆ ಕೊರೆದವು
ಮಾತುಗಳಲ್ಲಿ ವಿಷ ಬಿತ್ತಿದವು
ಗೊಂದಲದಲ್ಲಿ ಮುಳುಗಿಸಿದವು
ಮನದ ತಿಳಿ ಕದಡಿ ಕೊಚ್ಚೆ ಎಬ್ಬಿಸಿದವು…
ಹುಬ್ಬುಗಳ ನಡುವೆ ತೂರಿಕೊಂಡು
ನಗುವ ನುಂಗಿ ಎದೆಯ ಒತ್ತುತ್ತಲೇ ಇದ್ದವು…

ಗುರು ತೋರಿದ ಉಪಾಯದಲಿ
ನೂಲು ಹರಿಯದಂತೆ
ಗಂಟು ಬಿಚ್ಚುವ ಕಲೆ
ಸಿಕ್ಕಾಗದಂತೆ ಎಳೆಯ ನೇಯುವ ಕಲೆ
ಒಂದೊಂದಾಗಿ ತಿಳಿಯತೊಡಗಿತ್ತು
ಕಾರ್ಯ-ಕಾರಣ-ಪರಿಣಾಮಗಳ
ಭವಯಾನದ ಕರ್ಮ ಅರಿವಿಗೆ ನಿಲುಕಿತ್ತು.

Previous post ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
Next post ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ

Related Posts

ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...
ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...

Comments 1

  1. Harsha m patil
    Nov 11, 2020 Reply

    ಗಂಟಿಗೆ ಗಂಟು ಹಾಕುತ್ತಿರುವ ನಮಗೆ ಬದುಕೇ ಗಂಟಾಗಿ ಹೋಗಿದೆ. ರಿಪೇರಿ ಮಾಡಲು ಸಾಧ್ಯವಿಲ್ಲದಂತೆ ಸಂಬಂಧಗಳನ್ನು ಹಾಳುಮಾಡಿಕೊಂಡಿದ್ದೇವೆ….. ಕಣ್ಣಿಗೆ ಕಟ್ಟುವ ಚಿತ್ರಣ ನೀಡುವ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
ಸಾಮರಸ್ಯದ ಮಹಾನದಿ: ಕಡಕೋಳ ಮಡಿವಾಳಪ್ಪ
February 10, 2023
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಹೀಗೊಂದು ಹುಣ್ಣಿಮೆ…
ಹೀಗೊಂದು ಹುಣ್ಣಿಮೆ…
October 19, 2025
ಒಳಗಣ ಮರ
ಒಳಗಣ ಮರ
March 12, 2022
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಎಲ್ಲಿದೆ ಈ ಕ್ಷಣ?
ಎಲ್ಲಿದೆ ಈ ಕ್ಷಣ?
October 21, 2024
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
ವೈಜ್ಞಾನಿಕ ಧರ್ಮಿ ಬಸವಣ್ಣ – ಧಾರ್ಮಿಕ ವಿಜ್ಞಾನಿ ಐನ್‍ಸ್ಟೈನ್
June 14, 2024
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
Copyright © 2026 Bayalu