Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಾಳಿ ಬುರುಡೆ
Share:
Poems June 17, 2020 ಪದ್ಮಾಲಯ ನಾಗರಾಜ್

ಗಾಳಿ ಬುರುಡೆ

ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ
ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ
ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು
ಗಾಳಿಗೆ ತೂರ್ಹೋಗಬೇಡಾ //ನಂಬಿ//

ಚಿತ್ರಾ ವಿಚಿತ್ರದಿಂದಲಿ ಆಟವಾಡುತ ನಲಿಯುತಿಹುದು
ಒಂದರೊಳು ಹನ್ನೊಂದು ತೂರಿಸಿ ಬಣ್ಣದೋಕುಳಿ ಬಳಿಯುತಿಹುದು //ನಂಬಿ//

ಅನುಕ್ಷಣವೂ ನಿನ್ನ ಜತೆಯಲಿ/ನೆರಳಿನಂತೆ ನಲಿಯುತಿಹುದು
ಇಲ್ಲಸಲ್ಲದ ಕನಸ ತೋರಿಸಿ/ ಮಾಯಾಜಾಲವ ಹೆಣೆಯುತಿಹುದು //ನಂಬಿ//

ನಾದದೊಳಗೆ ಬಿಂದು ಮೋಹಿಸಿ/ ಹಾದರವೊಂದಾಗುತಿಹುದು
ಸಂತೆ ಕೂಟದ ಮನೆಯೊಳಗದು/ ಸಮರಸವನು ಕೊಲ್ಲುತಿಹುದು //ನಂಬಿ//

ಚಂಚಲಾಂಗಿಯು ನಾನೇ ಎನುತಿದೆ/ ಧರ್ಮಕರ್ಮ ನನ್ನದೆನುತಿದೆ
ಅಡವಿ ಸೇರಿ ಅವಿತು ಕುಳಿತರೂ/ ನಿನ್ನನೂ ಬಿಡಲಾರೆ ಎನುತಿದೆ //ನಂಬಿ//

ಸುತ್ತಮುತ್ತಾ ಮೇಲೆ ಕೆಳಗೆ/ ಆಕಾರರಹಿತ ನಾನು ಎನುತಿದೆ
ಸ್ವರ್ಗ-ನರಕ ನನ್ನದೆನುತಾ/ ಕೇಕೆ ಹಾಕಿ ನಗುತಲಿಹುದು //ನಂಬಿ//

ಹೆಸರೇ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲ
ಕದವ ತಟ್ಟಿ/ ನಿರ್ಭಯದಿ ಬದುಕು ಸಾಗಿಸಿ
ಆಳದಾ ನಿರಾಳವಾಗು //ನಂಬಿ//

Previous post WHO AM I?
WHO AM I?
Next post ಅವಿರಳ ಅನುಭಾವಿ-4
ಅವಿರಳ ಅನುಭಾವಿ-4

Related Posts

ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...
ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...

Comments 3

  1. ಬಸವಲಿಂಗಪ್ಪ ಕಡೂರು
    Jun 19, 2020 Reply

    ಗಾಳಿ ಬುರುಡೆಯು ನಮ್ಮನ್ನು ತೂರಿ ರೂರಿ ಕೇಕೇ ಹಾಕುತ್ತಿದೆ. ಬದುಕಿನ ಚಿತ್ರಣ ನೀಡುತ್ತದೆ. ರಾಗ ಹಾಕಿದರೆ ಸೊಗಸಾಗಿ ಹಾಡಬಹುದು.

  2. Jayaraj Bidar
    Jun 24, 2020 Reply

    ದೇಹ ಗಾಳಿ ಬುರುಡೆ, ಮನಸ್ಸು ಗಾಳಿ ಬುರುಡೆ, ನಮ್ಮ ಬದುಕೇ ಗಾಳಿ ಬುರುಡೆ ಎನ್ನಿಸಿತು. ವಿಚಾರಕ್ಕೊಡ್ಡುವ ಕವನ, ಪದ್ಮಾಲಯ ನಾಗರಾಜ್ ಶರಣರ ಕವನ ಸಂಕಲನಗಳೇನಾದರೂ ಇದ್ದರೆ ದಯವಿಟ್ಟು ತಿಳಿಸಿ.

  3. ಮಧುಸೂದನ್
    Jun 25, 2020 Reply

    ಮಾಯಾಜಾಲವ ಹೆಣೆವ ಗಾಳಿಬುರುಡೆ ಮನದ ಮುಂದಣ ಮಾಯೆ, ಆಸೆಗಳ ಜಾಲ. ಸರಳ, ಅರ್ಥಗರ್ಭಿತ ಹಾಡು.

Leave a Reply to ಬಸವಲಿಂಗಪ್ಪ ಕಡೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
Copyright © 2025 Bayalu