Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಾಳಿ ಬುರುಡೆ
Share:
Poems June 17, 2020 ಪದ್ಮಾಲಯ ನಾಗರಾಜ್

ಗಾಳಿ ಬುರುಡೆ

ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ
ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ
ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು
ಗಾಳಿಗೆ ತೂರ್ಹೋಗಬೇಡಾ //ನಂಬಿ//

ಚಿತ್ರಾ ವಿಚಿತ್ರದಿಂದಲಿ ಆಟವಾಡುತ ನಲಿಯುತಿಹುದು
ಒಂದರೊಳು ಹನ್ನೊಂದು ತೂರಿಸಿ ಬಣ್ಣದೋಕುಳಿ ಬಳಿಯುತಿಹುದು //ನಂಬಿ//

ಅನುಕ್ಷಣವೂ ನಿನ್ನ ಜತೆಯಲಿ/ನೆರಳಿನಂತೆ ನಲಿಯುತಿಹುದು
ಇಲ್ಲಸಲ್ಲದ ಕನಸ ತೋರಿಸಿ/ ಮಾಯಾಜಾಲವ ಹೆಣೆಯುತಿಹುದು //ನಂಬಿ//

ನಾದದೊಳಗೆ ಬಿಂದು ಮೋಹಿಸಿ/ ಹಾದರವೊಂದಾಗುತಿಹುದು
ಸಂತೆ ಕೂಟದ ಮನೆಯೊಳಗದು/ ಸಮರಸವನು ಕೊಲ್ಲುತಿಹುದು //ನಂಬಿ//

ಚಂಚಲಾಂಗಿಯು ನಾನೇ ಎನುತಿದೆ/ ಧರ್ಮಕರ್ಮ ನನ್ನದೆನುತಿದೆ
ಅಡವಿ ಸೇರಿ ಅವಿತು ಕುಳಿತರೂ/ ನಿನ್ನನೂ ಬಿಡಲಾರೆ ಎನುತಿದೆ //ನಂಬಿ//

ಸುತ್ತಮುತ್ತಾ ಮೇಲೆ ಕೆಳಗೆ/ ಆಕಾರರಹಿತ ನಾನು ಎನುತಿದೆ
ಸ್ವರ್ಗ-ನರಕ ನನ್ನದೆನುತಾ/ ಕೇಕೆ ಹಾಕಿ ನಗುತಲಿಹುದು //ನಂಬಿ//

ಹೆಸರೇ ಇಲ್ಲದಾ ಊರಿನೊಳಗೆ/ ಹುಲ್ಲುಗುಡಿಸಲ
ಕದವ ತಟ್ಟಿ/ ನಿರ್ಭಯದಿ ಬದುಕು ಸಾಗಿಸಿ
ಆಳದಾ ನಿರಾಳವಾಗು //ನಂಬಿ//

Previous post WHO AM I?
WHO AM I?
Next post ಅವಿರಳ ಅನುಭಾವಿ-4
ಅವಿರಳ ಅನುಭಾವಿ-4

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...

Comments 3

  1. ಬಸವಲಿಂಗಪ್ಪ ಕಡೂರು
    Jun 19, 2020 Reply

    ಗಾಳಿ ಬುರುಡೆಯು ನಮ್ಮನ್ನು ತೂರಿ ರೂರಿ ಕೇಕೇ ಹಾಕುತ್ತಿದೆ. ಬದುಕಿನ ಚಿತ್ರಣ ನೀಡುತ್ತದೆ. ರಾಗ ಹಾಕಿದರೆ ಸೊಗಸಾಗಿ ಹಾಡಬಹುದು.

  2. Jayaraj Bidar
    Jun 24, 2020 Reply

    ದೇಹ ಗಾಳಿ ಬುರುಡೆ, ಮನಸ್ಸು ಗಾಳಿ ಬುರುಡೆ, ನಮ್ಮ ಬದುಕೇ ಗಾಳಿ ಬುರುಡೆ ಎನ್ನಿಸಿತು. ವಿಚಾರಕ್ಕೊಡ್ಡುವ ಕವನ, ಪದ್ಮಾಲಯ ನಾಗರಾಜ್ ಶರಣರ ಕವನ ಸಂಕಲನಗಳೇನಾದರೂ ಇದ್ದರೆ ದಯವಿಟ್ಟು ತಿಳಿಸಿ.

  3. ಮಧುಸೂದನ್
    Jun 25, 2020 Reply

    ಮಾಯಾಜಾಲವ ಹೆಣೆವ ಗಾಳಿಬುರುಡೆ ಮನದ ಮುಂದಣ ಮಾಯೆ, ಆಸೆಗಳ ಜಾಲ. ಸರಳ, ಅರ್ಥಗರ್ಭಿತ ಹಾಡು.

Leave a Reply to ಮಧುಸೂದನ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
Copyright © 2025 Bayalu