Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ನಡೆಯ ಎಡೆ…
Share:
Poems

ನಡೆಯ ಎಡೆ…

April 5, 2026 ಕೆ.ಆರ್ ಮಂಗಳಾ
ಅತ್ತಿದ್ದು ನಕ್ಕಿದ್ದು ಒಳಗೊಳಗೇ ಬಿಕ್ಕಿದ್ದು ಮತ್ತೆ ಜಂಜಡಕೆ ಬೀಳಲಾರೆ ಇನ್ನು ಎಲ್ಲ ಕಲಿಸುವ ಬದುಕು ಎಲ್ಲ ತಿಳಿಸುವ ಗುರುವು ದಾಟಬಲ್ಲೆನು ಈಜಿ ನೂರು ಕಡಲು ಸುಖ-ದುಃಖ ಬರಹವನು...
ಈ ಕ್ಷಣದ ಸತ್ಯ
Share:
Poems

ಈ ಕ್ಷಣದ ಸತ್ಯ

March 12, 2022 ಕೆ.ಆರ್ ಮಂಗಳಾ
ಧಗಧಗಿಸಿ ಮೇಲೇರುತಿಹ ಕೆನ್ನಾಲಿಗೆಯ ಈ ಬೆಂಕಿ ಅಡಗಿತ್ತು ಎಲ್ಲಿ? ಮರದ ಬೊಡ್ಡೆಯಲೋ? ಒಣಗಿದ ಸೌದೆಯಲೋ, ಮದ್ದಗೀರಿದ ಕಡ್ಡಿಯಲ್ಲೋ, ಊದುತಿಹ ಗಾಳಿಯಲ್ಲೋ? ಎಲ್ಲಿಂದ ಬಂತು ಕಣ್ಣ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ದಾಸೋಹ ತತ್ವ
ದಾಸೋಹ ತತ್ವ
January 10, 2021
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
ಬಸವಣ್ಣ -ಬೆಂಜಮಿನ್ ಬ್ಲೂಮರ ಕಲಿಕಾ ವರ್ಗೀಕರಣ
January 7, 2022
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
Copyright © 2026 Bayalu