Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುತ್ತೂರಿ…
ತುತ್ತೂರಿ…
June 10, 2023
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಭವ ರಾಟಾಳ
ಭವ ರಾಟಾಳ
September 10, 2022
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಹಣತೆ ಸಾಕು
ಹಣತೆ ಸಾಕು
September 14, 2024
ಪೊರೆವ ದನಿ…
ಪೊರೆವ ದನಿ…
August 11, 2025
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
Copyright © 2025 Bayalu