Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...
ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೇಣು ದಾರಿ
ಗೇಣು ದಾರಿ
July 10, 2023
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
Copyright © 2026 Bayalu