Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...
ನಡೆಯ ಎಡೆ…
Share:
Poems

ನಡೆಯ ಎಡೆ…

April 5, 2026 ಕೆ.ಆರ್ ಮಂಗಳಾ
ಅತ್ತಿದ್ದು ನಕ್ಕಿದ್ದು ಒಳಗೊಳಗೇ ಬಿಕ್ಕಿದ್ದು ಮತ್ತೆ ಜಂಜಡಕೆ ಬೀಳಲಾರೆ ಇನ್ನು ಎಲ್ಲ ಕಲಿಸುವ ಬದುಕು ಎಲ್ಲ ತಿಳಿಸುವ ಗುರುವು ದಾಟಬಲ್ಲೆನು ಈಜಿ ನೂರು ಕಡಲು ಸುಖ-ದುಃಖ ಬರಹವನು...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕುರುಹೇ ಬಯಲು
ಕುರುಹೇ ಬಯಲು
February 16, 2026
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
Copyright © 2026 Bayalu