Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಶಿವಯೋಗ
ಶಿವಯೋಗ
July 4, 2021
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಹಾಯ್ಕು
ಹಾಯ್ಕು
September 6, 2023
ನೆಲದ ಮರೆಯ ನಿಧಾನದಂತೆ…
ನೆಲದ ಮರೆಯ ನಿಧಾನದಂತೆ…
April 29, 2018
ಕಣ್ಣ ದೀಪ
ಕಣ್ಣ ದೀಪ
September 7, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
Copyright © 2025 Bayalu