Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಏನ ಬೇಡಲಿ ಶಿವನೇ?
ಏನ ಬೇಡಲಿ ಶಿವನೇ?
August 2, 2020
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ
March 12, 2022
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಒಂದಷ್ಟು ಸರಳ ಸಲಹೆಗಳು…
ಒಂದಷ್ಟು ಸರಳ ಸಲಹೆಗಳು…
June 10, 2023
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
August 6, 2022
Copyright © 2025 Bayalu