Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave a Reply to ವರದರಾಜ್, ಬೆಂಗಳೂರು Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಶರಣ- ಎಂದರೆ…
ಶರಣ- ಎಂದರೆ…
March 6, 2020
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ನನ್ನೆದುರು ನಾ…
ನನ್ನೆದುರು ನಾ…
March 6, 2024
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
Copyright © 2026 Bayalu