Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆಂಬೋ ಬೆಳಗು…
Share:
Poems February 6, 2025 ಕೆ.ಆರ್ ಮಂಗಳಾ

ಗುರುವೆಂಬೋ ಬೆಳಗು…

ಒಳಗಿರುವುದೆಲ್ಲವೂ
ಕೂಡಿಸಿಟ್ಟುಕೊಂಡದ್ದೇ
ಬುದ್ಧಿ ಬಲಿತಾಗಿನಿಂದ
ಗೊತ್ತಿದ್ದೋ… ಇಲ್ಲದೆಯೋ

ನನಗೆ ನೆನಪಿದೆ
ಕಂಡದ್ದು ಉಂಡದ್ದು
ಮುಟ್ಟಿದ್ದು ಮೂಸಿದ್ದು
ತಟ್ಟಿದ್ದು ಸೆಳೆದದ್ದು
ನಕ್ಕಿದ್ದು ನಗಿಸಿದ್ದು
ಅತ್ತದ್ದು ಅಳಿಸಿದ್ದು..
ಎಲ್ಲ ಒಳಗಿಳಿದು
ಕಡು ಕೆಂಪಗಾಗಿ
ನರನಾಡಿಗಳಿಗೆಲ್ಲ ನುಗ್ಗಿ
ಲೆಕ್ಕಕ್ಕೆ ಸಿಗದಷ್ಟು
ಕತೆಗಳನು ಹೇಳೋ
ನೆನಪಿನ ಕೋಶಗಳಾಗಿ
ಹೆಜ್ಜೆಹಜ್ಜೆಗೂ ಕುರುಹಾಗಿ
ಕೆಣಕುತಿರುವುದೆಲ್ಲವೂ
ಹಿಂದಣ ಹಂಗು…

ಇಂದಲ್ಲ ನಾಳೆ
ಮತ್ತೆ ಯಾವಾಗಲಾದರೂ
ಸಿಕ್ಕೀತು, ದಕ್ಕೀತು
ಎನುವ ಬಯಕೆಗಳೆಲ್ಲ
ಕನವರಿಕೆಗಳಾಗಿ
ನಾಳೆಗಳ ಹಳವಂಡಗಳಾಗಿ
ಅದಾಗಿದ್ದರೆ ಇದಾಗಿದ್ದರೆ
ಎನುವ ರೆಗಳ ಲೋಕವಾಗಿ
ಹಾಗಾದರೆ ಹೀಗಾದರೆ
ಎನುವ ಲೆಕ್ಕಾಚಾರಗಳಾಗಿ
ಆಸೆಗಳಾಗಿ ಮೋಹವಾಗಿ
ನಿರೀಕ್ಷೆಯ ಭಾರವಾದದ್ದೆಲ್ಲಾ
ಮುಂದಣ ಮಾಯೆ…

ಹಿಂದು-ಮುಂದುಗಳ
ಸೆಳೆತದ ಸುಳಿಯೊಳಗೆ
ಸಮಯ ಸರಿದದ್ದು ಗೊತ್ತಾಗಿ
ಎಲ್ಲೋ ಎಡವಟ್ಟಾಯ್ತಲ್ಲ
ಅಯ್ಯೋ ಸಾಕೆನಗೆಂದು
ಜೀವ ಬಸವಳಿದಾಗ…
ಪ್ರಾಣವಾಯುವಿನಂತೆ
ಉಸಿರಾದ ನನ್ನ ಗುರು
ಅರಿವಾಗಿ, ಬೆಳಕಾಗಿ
ಎಚ್ಚರದ ಗಂಟೆಯಾಗಿ
ಇರುವಿಕೆಯ ಬಯಲಾಗಿ
ಕೈಹಿಡಿದ ತಾಯಾಗಿ!

Previous post ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
Next post ಅನಿಮಿಷನ ಕಥೆ- 6
ಅನಿಮಿಷನ ಕಥೆ- 6

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಗುರುಪಥ
ಗುರುಪಥ
January 4, 2020
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
Copyright © 2026 Bayalu