Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆಂಬೋ ಬೆಳಗು…
Share:
Poems February 6, 2025 ಕೆ.ಆರ್ ಮಂಗಳಾ

ಗುರುವೆಂಬೋ ಬೆಳಗು…

ಒಳಗಿರುವುದೆಲ್ಲವೂ
ಕೂಡಿಸಿಟ್ಟುಕೊಂಡದ್ದೇ
ಬುದ್ಧಿ ಬಲಿತಾಗಿನಿಂದ
ಗೊತ್ತಿದ್ದೋ… ಇಲ್ಲದೆಯೋ

ನನಗೆ ನೆನಪಿದೆ
ಕಂಡದ್ದು ಉಂಡದ್ದು
ಮುಟ್ಟಿದ್ದು ಮೂಸಿದ್ದು
ತಟ್ಟಿದ್ದು ಸೆಳೆದದ್ದು
ನಕ್ಕಿದ್ದು ನಗಿಸಿದ್ದು
ಅತ್ತದ್ದು ಅಳಿಸಿದ್ದು..
ಎಲ್ಲ ಒಳಗಿಳಿದು
ಕಡು ಕೆಂಪಗಾಗಿ
ನರನಾಡಿಗಳಿಗೆಲ್ಲ ನುಗ್ಗಿ
ಲೆಕ್ಕಕ್ಕೆ ಸಿಗದಷ್ಟು
ಕತೆಗಳನು ಹೇಳೋ
ನೆನಪಿನ ಕೋಶಗಳಾಗಿ
ಹೆಜ್ಜೆಹಜ್ಜೆಗೂ ಕುರುಹಾಗಿ
ಕೆಣಕುತಿರುವುದೆಲ್ಲವೂ
ಹಿಂದಣ ಹಂಗು…

ಇಂದಲ್ಲ ನಾಳೆ
ಮತ್ತೆ ಯಾವಾಗಲಾದರೂ
ಸಿಕ್ಕೀತು, ದಕ್ಕೀತು
ಎನುವ ಬಯಕೆಗಳೆಲ್ಲ
ಕನವರಿಕೆಗಳಾಗಿ
ನಾಳೆಗಳ ಹಳವಂಡಗಳಾಗಿ
ಅದಾಗಿದ್ದರೆ ಇದಾಗಿದ್ದರೆ
ಎನುವ ರೆಗಳ ಲೋಕವಾಗಿ
ಹಾಗಾದರೆ ಹೀಗಾದರೆ
ಎನುವ ಲೆಕ್ಕಾಚಾರಗಳಾಗಿ
ಆಸೆಗಳಾಗಿ ಮೋಹವಾಗಿ
ನಿರೀಕ್ಷೆಯ ಭಾರವಾದದ್ದೆಲ್ಲಾ
ಮುಂದಣ ಮಾಯೆ…

ಹಿಂದು-ಮುಂದುಗಳ
ಸೆಳೆತದ ಸುಳಿಯೊಳಗೆ
ಸಮಯ ಸರಿದದ್ದು ಗೊತ್ತಾಗಿ
ಎಲ್ಲೋ ಎಡವಟ್ಟಾಯ್ತಲ್ಲ
ಅಯ್ಯೋ ಸಾಕೆನಗೆಂದು
ಜೀವ ಬಸವಳಿದಾಗ…
ಪ್ರಾಣವಾಯುವಿನಂತೆ
ಉಸಿರಾದ ನನ್ನ ಗುರು
ಅರಿವಾಗಿ, ಬೆಳಕಾಗಿ
ಎಚ್ಚರದ ಗಂಟೆಯಾಗಿ
ಇರುವಿಕೆಯ ಬಯಲಾಗಿ
ಕೈಹಿಡಿದ ತಾಯಾಗಿ!

Previous post ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
Next post ಅನಿಮಿಷನ ಕಥೆ- 6
ಅನಿಮಿಷನ ಕಥೆ- 6

Related Posts

ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
Copyright © 2026 Bayalu