Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...
ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಹಾಯ್ಕುಗಳು
ಹಾಯ್ಕುಗಳು
November 10, 2022
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
Copyright © 2025 Bayalu