Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಹುಡುಕಾಟ…
ಹುಡುಕಾಟ…
August 8, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
ಶರಣ ಸಾಹಿತ್ಯ ಸಂಶೋಧನೆಯಲ್ಲಿ ಬೆಳಕಿಂಡಿ
April 29, 2018
ನಿನಗೂ ನನಗೂ ಒಂದೇ ನಿಜ
ನಿನಗೂ ನನಗೂ ಒಂದೇ ನಿಜ
January 15, 2026
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
Copyright © 2026 Bayalu