Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
ದಾಟಿಸುವ ತೆಪ್ಪಗಳನ್ನು ದಾಟುವ ವಿವೇಕ
September 10, 2022
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
Copyright © 2026 Bayalu