Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...
ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನೆದುರು ನಾ…
ನನ್ನೆದುರು ನಾ…
March 6, 2024
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಶರಣ- ಎಂದರೆ…
ಶರಣ- ಎಂದರೆ…
March 6, 2020
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಸುಮ್ಮನೆ ಇರು
ಸುಮ್ಮನೆ ಇರು
December 6, 2020
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
Copyright © 2026 Bayalu