Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave a Reply to Chandrika Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ನೋಟದ ಕೂಟ…
ನೋಟದ ಕೂಟ…
May 10, 2023
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ನೆಮ್ಮದಿ
ನೆಮ್ಮದಿ
April 6, 2020
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಶಾಸ್ತ್ರ ಘನವೆಂಬೆನೆ?
ಶಾಸ್ತ್ರ ಘನವೆಂಬೆನೆ?
December 3, 2018
WHO AM I?
WHO AM I?
June 17, 2020
Copyright © 2026 Bayalu