Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave a Reply to ಕೆ. ಎಸ್. ಮಲ್ಲೇಶ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
September 13, 2025
ಒಂದು ತೊಟ್ಟು ಬೆಳಕು
ಒಂದು ತೊಟ್ಟು ಬೆಳಕು
February 7, 2021
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಕಾಯಕಯೋಗಿನಿ ಕದಿರ ರೆಮ್ಮವ್ವೆ
ಕಾಯಕಯೋಗಿನಿ ಕದಿರ ರೆಮ್ಮವ್ವೆ
April 29, 2018
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಕಣ್ಣ ದೀಪ
ಕಣ್ಣ ದೀಪ
September 7, 2021
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಬಯಲಾಟ
ಬಯಲಾಟ
March 17, 2021
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
Copyright © 2026 Bayalu