Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...
ಅಪ್ಪನಿಲ್ಲದ ಮನೆ
Share:
Poems

ಅಪ್ಪನಿಲ್ಲದ ಮನೆ

January 10, 2021 ಕೆ.ಆರ್ ಮಂಗಳಾ
ಅಪ್ಪನಿಲ್ಲದ ಮನೆ ಎಲ್ಲ ಇದ್ದೂ ಭಣಗುಡುತ್ತಿದೆ. ಎದೆಯ ಬೆಳಕೇ ಆರಿ ಹೋದಂತೆ ಮನದಲ್ಲಿ ಗಾಢ ಕಾರ್ಗತ್ತಲೆ ಅವ್ವ ಹೇಳಿಕೊಂಡು ಹಗುರಾಗುತ್ತಿದ್ದಳು ಅಪ್ಪ ಮೌನ ಹೊದ್ದು...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave a Reply to ಕೆ. ಎಸ್. ಮಲ್ಲೇಶ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
May 10, 2022
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಸನಾತನ ಧರ್ಮ
ಸನಾತನ ಧರ್ಮ
October 10, 2023
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಮಾತು ಮಾಯೆ
ಮಾತು ಮಾಯೆ
July 4, 2021
Copyright © 2025 Bayalu