Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುರುವೆ ಸುಜ್ಞಾನವೇ…
Share:
Poems September 7, 2021 ಕೆ.ಆರ್ ಮಂಗಳಾ

ಗುರುವೆ ಸುಜ್ಞಾನವೇ…

ಇದೆ ಎಂದೊಲಿದದ್ದು ಇಲ್ಲ
ಹಾಗೇನೂ ಅಲ್ಲ
ಎಂದು ಬಲವಾಗಿ ನಂಬಿದ್ದೂ
ಇಲ್ಲವೇ ಇಲ್ಲ…

ಹಂಬಲಿಸಿ ಹಿಡಿದಿದ್ದೆ
ಹಟ ತೊಟ್ಟು ಪಡೆದಿದ್ದೆ
ಹಬ್ಬಿಸಿಕೊಂಡಿದ್ದೇ
ಕುಸುರಿ ಭಾವಗಳ,
ಮನದ ಕವಾಟಗಳಲ್ಲಿ
ಮಧುರ ಮಾತುಗಳಲ್ಲಿ…

ಬಣ್ಣಗೆಟ್ಟವು
ದಿಕ್ಕು ಬದಲಿಸಿದವು
ನಾನೆಂಬ ದಿಬ್ಬವನು
ಒದ್ದು ಓಡಿದವು
ಕಾಲಸರಿದಂತೆಲ್ಲ
ಎಲ್ಲೋ ಮಾಯವಾದವು.
ಆದರೂ…
ಹಳಹಳಿಸಿದ ಮನ
ಮರೆವ ಕೊಡವಲಿಲ್ಲ
ಕಣ್ಣಲ್ಲಿ ಕಣ್ಣಿಟ್ಟು
ನಿಜವ ಹುಡುಕಲಿಲ್ಲ
ನಿಶೆ ಇಳಿದ ಮೇಲಾದರೂ
ಹಗಲಾಗ ಬೇಕಿತ್ತು…

ಪೊರೆಗಟ್ಟಿದ ಕಣ್ಣಲಿ
ಬೆಳಕಿನೆಳೆಗಳು
ತೂರುವುದು ಉಂಟೆ?
ಕಂಬಳಿ ಹೊದ್ದ ಎದೆಗೆ
ತಿಳಿಗಾಳಿಯಲೆ
ನುಸುಳ ಬಲ್ಲುದೆ?
ಉಸಿರಿಗೆ ತಡೆಯಾದ
ಹೊದಿಕೆಯ ಸರಿಸಲು
ಗಮನಕೆ ಅಡ್ಡಿಯಾದ
ಪೊರೆಯ ಕತ್ತರಿಸಲು
ನಿಂತ ಕಾಲುಗಳಿಗೆ
ನಡೆಯ ತೋರಿಸಲು
ಓ ಗುರುವೇ…
ನೀನೇ ಬರಬೇಕಾಯಿತು
ಕೈಹಿಡಿದು
ಭಾವ ಕಂದಕವನು
ದಾಟುವುದ ಕಲಿಸಲು.

Previous post ಕಣ್ಣ ದೀಪ
ಕಣ್ಣ ದೀಪ
Next post ವಚನಗಳ ಮಹತ್ವ
ವಚನಗಳ ಮಹತ್ವ

Related Posts

ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 3

  1. Chandrika
    Sep 11, 2021 Reply

    ಭಾವದ ಭವವನ್ನು ದಾಟಲು ಗುರುವಿನ ಕೈಹಿಡಿದು ನಡೆವ ಬಗೆ ಸುಂದರವಾಗಿ ಅಭಿವ್ಯಕ್ತವಾಗಿದೆ.

  2. ಕೆ. ಎಸ್. ಮಲ್ಲೇಶ್
    Oct 8, 2021 Reply

    ಸರಳ ಹಾಗೂ ನೇರ ಪದಗಳಲ್ಲಿ ಅನುಪಮ ರೂಪಕಗಳ ಮೂಲಕ ಗುರುವಿನ ಮಹತ್ವವನ್ನು ಮನಮುಟ್ಟುವಂತೆ ತಿಳಿಸುವ ಕವನ. ಐಹಿಕ ಬದುಕಿನ ತೋರಿಕೆಯ ಆವರಣದೊಳಗೆ ಸಿಲುಕಿದ ಜೀವಕ್ಕೆ ಕೊನೆಗೂ ಗುರು ನಿಲುಕಿದ್ದು -ಇದೇ ಭವಕ್ಕೆ ಅನುಭಾವದ ಸಿಂಚನ

  3. SHARAN swami
    Oct 14, 2021 Reply

    ಗುರು ಶಿಷ್ಯರ ಸಂಬಂಧದ ಮಹತ್ವ ಮಧುರ ರೀತಿಯಲ್ಲಿ ಭಾವಗಳ ಮೂಲಕ ವ್ಯಕ್ತಪಡಿಸಿದ್ಧಿರಿ. ಶರಣು ಶರಣಾರ್ಥಿ

Leave a Reply to ಕೆ. ಎಸ್. ಮಲ್ಲೇಶ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಗೇಣು ದಾರಿ
ಗೇಣು ದಾರಿ
July 10, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಮನಸ್ಸು
ಮನಸ್ಸು
September 7, 2020
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
Copyright © 2025 Bayalu