Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಭವ ರಾಟಾಳ
Share:
Poems

ಭವ ರಾಟಾಳ

September 10, 2022 ಕೆ.ಆರ್ ಮಂಗಳಾ
ಇಗೋ ಹರಾಜಾಗುತ್ತಿದೆ ಈ ದೇಹ ಪ್ರತಿ ದಿನ, ಪ್ರತಿ ಗಳಿಗೆ ಕಾಣದ ಖದೀಮನ ಕೈಗೆ ಸಿಕ್ಕು ತನ್ನದಲ್ಲದ ಕಾಯವನು ಹರಾಜು ಹಾಕುತ್ತಲೇ ಇರುತ್ತಾನೆ ಕ್ಷಣಾರ್ಧದ ಬಿಡುವೂ ಕೊಡದೆ...
ಹೆಸರಿಲ್ಲದಾ ಊರಿನ ಹಾಡು
Share:
Poems

ಹೆಸರಿಲ್ಲದಾ ಊರಿನ ಹಾಡು

May 6, 2020 ಪದ್ಮಾಲಯ ನಾಗರಾಜ್
ಚಿಂತೆಯೊಳಗೇ ಹಾವೊಂದೈತೆ/ ಡೊಂಕು ಹಾದಿಯ ತೊರೆಯಿರೋ ನಾನು ಎಂಬುದು ಕಳಚಿ ಹೋದರೆ/ ಇಹುದು ಸುಖವೆಂದರಿಯಿರೋ //ಪ// ಮೂರ್ಖತನದ ಕತ್ತಲೊಳಗೆ/ ಭ್ರಮೆಯ ಗಿಳಿಯೊಂದಾಡಿತೋ ಶೋಕಿ ದಾರಿಯು...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಧರ್ಮವನ್ನು ಒಡೆಯುವುದು – ಹಾಗೆಂದರೇನು?
ಧರ್ಮವನ್ನು ಒಡೆಯುವುದು – ಹಾಗೆಂದರೇನು?
October 2, 2018
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಅನುಭವ ಮಂಟಪ
ಅನುಭವ ಮಂಟಪ
April 11, 2025
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
Copyright © 2026 Bayalu