Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...
ಸಂತೆಯೊಳಗಿನ ಧ್ಯಾನ
Share:
Poems

ಸಂತೆಯೊಳಗಿನ ಧ್ಯಾನ

May 10, 2022 ಜ್ಯೋತಿಲಿಂಗಪ್ಪ
ಈಗ ಗಾಳಿಗೆ ತೂರಿ ಹೋಗುವ ಜೊಳ್ಳು ಬಯಲೊಳಗೆ ಜೋಳಿಗೆಗೆ ಖಾಲಿ ಈ ಊರೇನು ಆ ಊರೇನು ಇರದ ಊರಲಿ ಕಾಲೂರುವೆ ಮೋಡದ ಮರೆಯಿಂದ ಬಂದ ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ ಗಾಳಿಯೂ ತೂರದ...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸುಂದರ, ಸೂಕ್ಷ್ಮ ದ್ವೀಪ ಜಪಾನ್
ಸುಂದರ, ಸೂಕ್ಷ್ಮ ದ್ವೀಪ ಜಪಾನ್
September 14, 2024
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
March 9, 2023
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ನೆಮ್ಮದಿ
ನೆಮ್ಮದಿ
April 6, 2020
Copyright © 2025 Bayalu