Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಲಿಂಗವಾಗುವ ಪರಿ…
ಲಿಂಗವಾಗುವ ಪರಿ…
April 29, 2018
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ನನ್ನೆದುರು ನಾ…
ನನ್ನೆದುರು ನಾ…
March 6, 2024
ಆಸರೆ
ಆಸರೆ
August 6, 2022
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
Copyright © 2026 Bayalu