Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಸೋತ ಅಂಗೈಗಳಿಗಂಟಿ…
Share:
Poems

ಸೋತ ಅಂಗೈಗಳಿಗಂಟಿ…

October 19, 2025 ಜಬೀವುಲ್ಲಾ ಎಂ.ಅಸದ್
ನನ್ನಲ್ಲಿ ನೀನು ತುಂಬಿರಲು ನಿನ್ನಲ್ಲಿಲ್ಲ ನಾನು ಇಲ್ಲವೆಂಬ ಅರಿವು ನನ್ನಲ್ಲಿರಲು ಇನ್ನೂ ಹೇಳಲಿ ಏನು? ಒಡೆದ ಗಾಜಿನ ಲೋಟ ಚೂರಾದ ಹೃದಯದ ನೋಟ ಎರಡೂ ಒಂದೇ ಆಗಿರುವಾಗ ಈಗ ಮುರಿದ...
ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
ಕ್ಯಾಲೆಂಡರ್ ಸಂಸ್ಕೃತಿ ಮತ್ತು ಬಸವಣ್ಣ
July 4, 2022
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಶಿವಾಚಾರ
ಶಿವಾಚಾರ
April 9, 2021
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಗಡಿಯಲ್ಲಿ ನಿಂತು…
ಗಡಿಯಲ್ಲಿ ನಿಂತು…
May 6, 2021
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
April 29, 2018
Copyright © 2025 Bayalu