Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಈ  ದಾರಿ…
Share:
Poems

ಈ ದಾರಿ…

May 10, 2023 ಜ್ಯೋತಿಲಿಂಗಪ್ಪ
ಈ ದಾರಿ ಹೋಗುವುದು ಎಲ್ಲಿಗೆ ನಾನೂ ಅರಿಯೆ ನೀವೂ ಅರಿಯೆರಿ ಅರಿದವನಂತೆ ನಾನು ಹೋಗುತಿರಲು ಅರಿಯದವರಂತೆ ನೀವು ಸುಮ್ಮನೇ ಇರುವಿರಿ ಏನು ಚೆಂದ ಅಲ್ಲಲ್ಲಿಗೆ ಅಲ್ಲಲ್ಲಿಗೆ ದಾರಿ...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave a Reply to Chaitanya Indudhar Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಅನುಭವ ಮಂಟಪ
ಅನುಭವ ಮಂಟಪ
April 11, 2025
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ವಚನ – ಚಿಂತನ
ವಚನ – ಚಿಂತನ
October 10, 2023
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
Copyright © 2026 Bayalu