Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುತ್ತೂರಿ…
Share:
Poems June 10, 2023 ಕೆ.ಆರ್ ಮಂಗಳಾ

ತುತ್ತೂರಿ…

ತುತ್ತೂರಿ ತುತ್ತೂರಿ
ಯಾಕೆ ಇಂತಹ ಪಿತೂರಿ?

ಯಾವುದೇ ಮಾತಲೂ ನಿನ್ನದೇ ರಾಗ
ಯಾವುದೇ ಭಾವಕೂ ನಿನ್ನದೇ ತಾಳ
ಬಾಯಿಬಿಟ್ಟರೂ ನಿನ್ನದೇ ಗಾನ
ಮೌನದಲಿದ್ದರೂ ನಿನ್ನದೇ ಧ್ಯಾನ
ಮಾತುಮಾತಿನಲೂ ನಿನ್ನದೇ ಹೊಳಪು
ಸ್ವಗತದ ಸರಿಗಮ ನಿನ್ನದೇ ಛಾಪು!

ತುತ್ತೂರಿ ತುತ್ತೂರಿ…

ಹಿಂದಕೆ ಹೋದರೂ ಕಾಲಿಗೆ ಸಿಗುವೆ
ಮುಂದಕೆ ಬಂದರೂ ಕಣ್ಮುಂದೇ ಇರುವೆ
ಕಡೆಗಣಿಸಿದರೂ ಕಾಯುತ ನಿಲ್ಲುವೆ
ತಳ್ಳುತಲಿದ್ದರೂ ನುಸುನುಸುಳಿ ಬರುವೆ
ಸರಿಸುತಲಿದ್ದರೂ ಹೇಗೋ ನುಗ್ಗುವೆ
ಎಲ್ಲಿದೆಯೊ ಅರಿಯೆ ನೀನಿಲ್ಲದ ತಾಣ

ತುತ್ತೂರಿ ತುತ್ತೂರಿ…

ನೆನಪಿನ ಕನವರಿಕೆಗಳೆಲ್ಲ ನೀನೇ
ನಾಳಿನ ಕನಸುಗಳೆಲ್ಲವೂ ನೀನೇ
ಭಾವಗಳುದ್ದಕೂ ಮೈಚಾಚಿರುವೆ
ತಲೆಯೊಳಗೆ ಅಡಗಿ ಕುಳಿತಿರುವೆ
ನಿನ್ನೆ-ನಾಳೆಗಳ ಜೀಕುವ ಮನದಲಿ
ನೀನಲ್ಲದೆ ಬೇರೇನಿದೆ ಅಲ್ಲಿ?

ತುತ್ತೂರಿ ತುತ್ತೂರಿ…

ಬಗೆಬಗೆಯ ರೂಪದೊಳಿರುವೆ
ಗುರುತಿಸದಂತೆ ವೇಷವ ತೊಡುವೆ
ಕೈಗೆ ಸಿಗದಂತೆ ಬಣ್ಣ ಬದಲಿಸುವೆ
ಸಮಯಕೆ ತಕ್ಕ ರಾಗ ಹಾಕುವೆ
ನೀನರಿಯದ ತಂತ್ರಗಳಿವೆಯೇ?
ನೀನರಿಯದ ಕಪಟಗಳಿವೆಯೇ?

ತುತ್ತೂರಿ ತುತ್ತೂರಿ…

ಮೈಯನಪ್ಪಿದ ಮಾಯೆಯು ನೀನು
ಬುದ್ಧಿಗೆ ಬಡಿದ ಭೂತವು ನೀನು
ಕಾಣದೆ ಅಂಟಿದ ಸೂತಕ ನೀನು
ನಾನೆ ನೀನೆಂದು ಸಾಧಿಸಿ ಗೆದ್ದೆI
ನಿನ್ನನ್ನೇ ನಾನೆಂದು ನಂಬಿದೆ
ನಿನ್ನದೆ ಗದ್ದುಗೆ ನಿನ್ನದೆ ಶಾಸನ

ತುತ್ತೂರಿ ತುತ್ತೂರಿ…

ಇಂತು
ಸ್ವಯದ ಮೇಲೆ ಸಾಗಿತ್ತು
ಪರದ ಮೆರವಣಿಗೆ
ಗುರು ಬರುವ ತನಕ ನಡೆದಿತ್ತು
ಸೆಂಗೋಲಿನ ಉರವಣಿಗೆ…

Previous post ಮೀನಿನ ಬಯಕೆ
ಮೀನಿನ ಬಯಕೆ
Next post ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…

Related Posts

ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...
ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಅಂದು-ಇಂದು
ಅಂದು-ಇಂದು
December 8, 2021
ಆಸರೆ
ಆಸರೆ
August 6, 2022
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
Copyright © 2026 Bayalu