Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುತ್ತೂರಿ…
Share:
Poems June 10, 2023 ಕೆ.ಆರ್ ಮಂಗಳಾ

ತುತ್ತೂರಿ…

ತುತ್ತೂರಿ ತುತ್ತೂರಿ
ಯಾಕೆ ಇಂತಹ ಪಿತೂರಿ?

ಯಾವುದೇ ಮಾತಲೂ ನಿನ್ನದೇ ರಾಗ
ಯಾವುದೇ ಭಾವಕೂ ನಿನ್ನದೇ ತಾಳ
ಬಾಯಿಬಿಟ್ಟರೂ ನಿನ್ನದೇ ಗಾನ
ಮೌನದಲಿದ್ದರೂ ನಿನ್ನದೇ ಧ್ಯಾನ
ಮಾತುಮಾತಿನಲೂ ನಿನ್ನದೇ ಹೊಳಪು
ಸ್ವಗತದ ಸರಿಗಮ ನಿನ್ನದೇ ಛಾಪು!

ತುತ್ತೂರಿ ತುತ್ತೂರಿ…

ಹಿಂದಕೆ ಹೋದರೂ ಕಾಲಿಗೆ ಸಿಗುವೆ
ಮುಂದಕೆ ಬಂದರೂ ಕಣ್ಮುಂದೇ ಇರುವೆ
ಕಡೆಗಣಿಸಿದರೂ ಕಾಯುತ ನಿಲ್ಲುವೆ
ತಳ್ಳುತಲಿದ್ದರೂ ನುಸುನುಸುಳಿ ಬರುವೆ
ಸರಿಸುತಲಿದ್ದರೂ ಹೇಗೋ ನುಗ್ಗುವೆ
ಎಲ್ಲಿದೆಯೊ ಅರಿಯೆ ನೀನಿಲ್ಲದ ತಾಣ

ತುತ್ತೂರಿ ತುತ್ತೂರಿ…

ನೆನಪಿನ ಕನವರಿಕೆಗಳೆಲ್ಲ ನೀನೇ
ನಾಳಿನ ಕನಸುಗಳೆಲ್ಲವೂ ನೀನೇ
ಭಾವಗಳುದ್ದಕೂ ಮೈಚಾಚಿರುವೆ
ತಲೆಯೊಳಗೆ ಅಡಗಿ ಕುಳಿತಿರುವೆ
ನಿನ್ನೆ-ನಾಳೆಗಳ ಜೀಕುವ ಮನದಲಿ
ನೀನಲ್ಲದೆ ಬೇರೇನಿದೆ ಅಲ್ಲಿ?

ತುತ್ತೂರಿ ತುತ್ತೂರಿ…

ಬಗೆಬಗೆಯ ರೂಪದೊಳಿರುವೆ
ಗುರುತಿಸದಂತೆ ವೇಷವ ತೊಡುವೆ
ಕೈಗೆ ಸಿಗದಂತೆ ಬಣ್ಣ ಬದಲಿಸುವೆ
ಸಮಯಕೆ ತಕ್ಕ ರಾಗ ಹಾಕುವೆ
ನೀನರಿಯದ ತಂತ್ರಗಳಿವೆಯೇ?
ನೀನರಿಯದ ಕಪಟಗಳಿವೆಯೇ?

ತುತ್ತೂರಿ ತುತ್ತೂರಿ…

ಮೈಯನಪ್ಪಿದ ಮಾಯೆಯು ನೀನು
ಬುದ್ಧಿಗೆ ಬಡಿದ ಭೂತವು ನೀನು
ಕಾಣದೆ ಅಂಟಿದ ಸೂತಕ ನೀನು
ನಾನೆ ನೀನೆಂದು ಸಾಧಿಸಿ ಗೆದ್ದೆI
ನಿನ್ನನ್ನೇ ನಾನೆಂದು ನಂಬಿದೆ
ನಿನ್ನದೆ ಗದ್ದುಗೆ ನಿನ್ನದೆ ಶಾಸನ

ತುತ್ತೂರಿ ತುತ್ತೂರಿ…

ಇಂತು
ಸ್ವಯದ ಮೇಲೆ ಸಾಗಿತ್ತು
ಪರದ ಮೆರವಣಿಗೆ
ಗುರು ಬರುವ ತನಕ ನಡೆದಿತ್ತು
ಸೆಂಗೋಲಿನ ಉರವಣಿಗೆ…

Previous post ಮೀನಿನ ಬಯಕೆ
ಮೀನಿನ ಬಯಕೆ
Next post ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ
April 29, 2018
ಶಿವನ ಕುದುರೆ…
ಶಿವನ ಕುದುರೆ…
May 1, 2019
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
Copyright © 2026 Bayalu