Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುತ್ತೂರಿ…
Share:
Poems June 10, 2023 ಕೆ.ಆರ್ ಮಂಗಳಾ

ತುತ್ತೂರಿ…

ತುತ್ತೂರಿ ತುತ್ತೂರಿ
ಯಾಕೆ ಇಂತಹ ಪಿತೂರಿ?

ಯಾವುದೇ ಮಾತಲೂ ನಿನ್ನದೇ ರಾಗ
ಯಾವುದೇ ಭಾವಕೂ ನಿನ್ನದೇ ತಾಳ
ಬಾಯಿಬಿಟ್ಟರೂ ನಿನ್ನದೇ ಗಾನ
ಮೌನದಲಿದ್ದರೂ ನಿನ್ನದೇ ಧ್ಯಾನ
ಮಾತುಮಾತಿನಲೂ ನಿನ್ನದೇ ಹೊಳಪು
ಸ್ವಗತದ ಸರಿಗಮ ನಿನ್ನದೇ ಛಾಪು!

ತುತ್ತೂರಿ ತುತ್ತೂರಿ…

ಹಿಂದಕೆ ಹೋದರೂ ಕಾಲಿಗೆ ಸಿಗುವೆ
ಮುಂದಕೆ ಬಂದರೂ ಕಣ್ಮುಂದೇ ಇರುವೆ
ಕಡೆಗಣಿಸಿದರೂ ಕಾಯುತ ನಿಲ್ಲುವೆ
ತಳ್ಳುತಲಿದ್ದರೂ ನುಸುನುಸುಳಿ ಬರುವೆ
ಸರಿಸುತಲಿದ್ದರೂ ಹೇಗೋ ನುಗ್ಗುವೆ
ಎಲ್ಲಿದೆಯೊ ಅರಿಯೆ ನೀನಿಲ್ಲದ ತಾಣ

ತುತ್ತೂರಿ ತುತ್ತೂರಿ…

ನೆನಪಿನ ಕನವರಿಕೆಗಳೆಲ್ಲ ನೀನೇ
ನಾಳಿನ ಕನಸುಗಳೆಲ್ಲವೂ ನೀನೇ
ಭಾವಗಳುದ್ದಕೂ ಮೈಚಾಚಿರುವೆ
ತಲೆಯೊಳಗೆ ಅಡಗಿ ಕುಳಿತಿರುವೆ
ನಿನ್ನೆ-ನಾಳೆಗಳ ಜೀಕುವ ಮನದಲಿ
ನೀನಲ್ಲದೆ ಬೇರೇನಿದೆ ಅಲ್ಲಿ?

ತುತ್ತೂರಿ ತುತ್ತೂರಿ…

ಬಗೆಬಗೆಯ ರೂಪದೊಳಿರುವೆ
ಗುರುತಿಸದಂತೆ ವೇಷವ ತೊಡುವೆ
ಕೈಗೆ ಸಿಗದಂತೆ ಬಣ್ಣ ಬದಲಿಸುವೆ
ಸಮಯಕೆ ತಕ್ಕ ರಾಗ ಹಾಕುವೆ
ನೀನರಿಯದ ತಂತ್ರಗಳಿವೆಯೇ?
ನೀನರಿಯದ ಕಪಟಗಳಿವೆಯೇ?

ತುತ್ತೂರಿ ತುತ್ತೂರಿ…

ಮೈಯನಪ್ಪಿದ ಮಾಯೆಯು ನೀನು
ಬುದ್ಧಿಗೆ ಬಡಿದ ಭೂತವು ನೀನು
ಕಾಣದೆ ಅಂಟಿದ ಸೂತಕ ನೀನು
ನಾನೆ ನೀನೆಂದು ಸಾಧಿಸಿ ಗೆದ್ದೆI
ನಿನ್ನನ್ನೇ ನಾನೆಂದು ನಂಬಿದೆ
ನಿನ್ನದೆ ಗದ್ದುಗೆ ನಿನ್ನದೆ ಶಾಸನ

ತುತ್ತೂರಿ ತುತ್ತೂರಿ…

ಇಂತು
ಸ್ವಯದ ಮೇಲೆ ಸಾಗಿತ್ತು
ಪರದ ಮೆರವಣಿಗೆ
ಗುರು ಬರುವ ತನಕ ನಡೆದಿತ್ತು
ಸೆಂಗೋಲಿನ ಉರವಣಿಗೆ…

Previous post ಮೀನಿನ ಬಯಕೆ
ಮೀನಿನ ಬಯಕೆ
Next post ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…

Related Posts

ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...
ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಸಂತೆಯ ಸಂತ
ಸಂತೆಯ ಸಂತ
September 7, 2020
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಲಿಂಗಪೂಜೆ – ಜಂಗಮಸೇವೆ
ಲಿಂಗಪೂಜೆ – ಜಂಗಮಸೇವೆ
March 12, 2022
Copyright © 2026 Bayalu