Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಆಸರೆ
Share:
Poems

ಆಸರೆ

August 6, 2022 ಜ್ಯೋತಿಲಿಂಗಪ್ಪ
ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
Copyright © 2025 Bayalu