Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
Copyright © 2026 Bayalu