Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ಖಗೋಳ ವಿಜ್ಞಾನ
ವಚನಗಳಲ್ಲಿ ಖಗೋಳ ವಿಜ್ಞಾನ
September 7, 2020
ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
January 8, 2023
ಶಾಂತಿ
ಶಾಂತಿ
April 11, 2025
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
ಕಲಾ ಧ್ಯಾನಿ: ವಿನ್ಸೆಂಟ್ ವ್ಯಾನ್ ಗೊ
October 10, 2023
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
Copyright © 2026 Bayalu