Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave a Reply to ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
Copyright © 2026 Bayalu