Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
April 6, 2023
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
ಲಿಂಗಾಯತ ಧರ್ಮದ ಆಕರಗಳು ಮತ್ತು ಗ್ರಂಥಕರ್ತೃಗಳು
August 10, 2023
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
WHO AM I?
WHO AM I?
June 17, 2020
Copyright © 2025 Bayalu