Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಅಮುಗೆ ರಾಯಮ್ಮ (ಭಾಗ-3)
ಅಮುಗೆ ರಾಯಮ್ಮ (ಭಾಗ-3)
November 10, 2022
ಗೇಣು ದಾರಿ
ಗೇಣು ದಾರಿ
July 10, 2023
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
Copyright © 2025 Bayalu