Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...
ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
April 6, 2023
ಶೂನ್ಯ ಸಂಪಾದನೆ ಎಂದರೇನು?
ಶೂನ್ಯ ಸಂಪಾದನೆ ಎಂದರೇನು?
January 8, 2023
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
Copyright © 2026 Bayalu