Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಯಲಾಟ
ಬಯಲಾಟ
March 17, 2021
ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
May 10, 2022
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಹೊತ್ತು ಹೋಗದ ಮುನ್ನ…
ಹೊತ್ತು ಹೋಗದ ಮುನ್ನ…
April 29, 2018
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಕಲ್ಯಾಣದ ಮಹಾಮನೆ
ಕಲ್ಯಾಣದ ಮಹಾಮನೆ
June 12, 2025
Copyright © 2026 Bayalu