Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ಹುಚ್ಚು ಖೋಡಿ ಮನಸು
Share:
Poems

ಹುಚ್ಚು ಖೋಡಿ ಮನಸು

August 6, 2022 ಕೆ.ಆರ್ ಮಂಗಳಾ
ಕಪ್ಪು ಕೌದಿಯ ಹೊದ್ದು ತನ್ನ ಬಣ್ಣವನೇ ಮರೆತು ಮಲಗಿಬಿಟ್ಟಿದೆ ನೀಲಿಯಾಗಸ ಒಳ-ಹೊರಗು ಮಬ್ಬಾಯ್ತು… ಕತ್ತಲೆಯ ನಂಜೇರಿ ಕಣ್ಣು ಹರಿಸಿದುದ್ದಕ್ಕೂ ಎಲ್ಲೆಲ್ಲೂ ಮಸುಕು ನಿಂತಲ್ಲೇ...
ಹುಡುಕಾಟ…
Share:
Poems

ಹುಡುಕಾಟ…

August 8, 2021 ಜ್ಯೋತಿಲಿಂಗಪ್ಪ
ಈ ಮರವೆ ಯಾವಾಗ ಬರುತ್ತೋ ಕಾಯುತಾ ಕುಳಿತಿರುವೆ ಅಲೆದಾಡಿ ಕಾಲು ಸೋತಿವೆ ಹುಡುಕಾಡಿ ಕಣ್ಣು ಸೋತಿವೆ ಅರಗಿಸಲಾಗದ ರುಚಿ ಕಂಡಿದೆ ನಾಲಿಗೆ ಹೇಳಲಾಗದ ವಾಸನೆಯೊಳಗೆ ಮೂಗು ತೂರಿದೆ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave a Reply to ಷಡಕ್ಷರಿ ಎಸ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಮನ ಉಂಟೇ ಮರುಳೇ, ಶಿವಯೋಗಿಗೆ?
ಮನ ಉಂಟೇ ಮರುಳೇ, ಶಿವಯೋಗಿಗೆ?
November 10, 2022
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
June 5, 2021
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
Copyright © 2026 Bayalu