Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ಮನಸ್ಸು
Share:
Poems

ಮನಸ್ಸು

September 7, 2020 ಕೆ.ಆರ್ ಮಂಗಳಾ
ಏನ ಹೇಳಲಿ ಗುರುವೇ ಮನಸಿನ ಬಗೆಗೆ? ಹಿಂದಕ್ಕೆ ಜಾರುತ್ತಾ ಮುಂದಕ್ಕೆ ತುಯ್ಯುತ್ತಾ ಜೋಕಾಲಿಯಾಟದಲಿ ಮೈಮರೆಸಿಬಿಟ್ಟಿದೆ ಇದಾವ ಮರದ ಕೊಂಬೆಗೆ ನೇತು ಹಾಕಿಕೊಂಡಿದೆ… ಎಂದು ಕಟ್ಟಿದೆನೋ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave a Reply to ಷಡಕ್ಷರಿ ಎಸ್ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಹಜತೆಯೇ ನಿಜನೆಲೆ
ಸಹಜತೆಯೇ ನಿಜನೆಲೆ
February 5, 2020
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ಮಾತು ಮಾಯೆ
ಮಾತು ಮಾಯೆ
July 4, 2021
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
December 9, 2025
Copyright © 2026 Bayalu