Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave a Reply to ಶಿವಪುತ್ರ ಕಲ್ಲಹಳ್ಳಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
ತುಮ್ಹಾರೆ ಸಿವಾ ಔರ್ ಕೋಯಿ ನಹಿ…
July 10, 2023
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಶರಣನಾಗುವುದು…
ಶರಣನಾಗುವುದು…
February 10, 2023
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
Copyright © 2025 Bayalu