Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ಮೀನಿನ ಬಯಕೆ
Share:
Poems

ಮೀನಿನ ಬಯಕೆ

June 10, 2023 ಡಾ. ಕೆ. ಎಸ್. ಮಲ್ಲೇಶ್
ಒಮ್ಮೆ ಒಂದು ಪುಟ್ಟ ಮೀನು ಈಜಿ ದಡದ ಬಳಿಗೆ ಬಂದು ಕೆರೆಯ ಪಕ್ಕ ಮನುಜನೊಬ್ಬನನ್ನು ಕಂಡಿತು ಬಟ್ಟಲಂತ ಕಣ್ಣ ತೆರೆದು ಪುಟ್ಟ ಮೀನು ನಗೆಯ ಸೂಸಿ ಗೆಳೆಯನಾಗು ನನಗೆ ಎನುತ ಅಂಗಲಾಚಿತು...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave a Reply to ಶಿವಪುತ್ರ ಕಲ್ಲಹಳ್ಳಿ Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
September 14, 2024
ದಾರಿ ಬಿಡಿ…
ದಾರಿ ಬಿಡಿ…
December 6, 2020
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
Copyright © 2026 Bayalu