Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಾರಿಯಲ್ಲದ ದಾರಿ…
Share:
Poems October 10, 2023 ಕೆ.ಆರ್ ಮಂಗಳಾ

ದಾರಿಯಲ್ಲದ ದಾರಿ…

ಗುರು ತೋರಿದ ದಾರಿಯಲಿ
ಬಂಡೆಗಳ ಸಿಡಿಸಬೇಕು
ಗುಡ್ಡಗಳ ಒಡೆಯಬೇಕು
ಕಮರಿ, ಹೊಳ್ಳ ದಾಟಬೇಕು
ಮುಳ್ಳುಗಂಟಿ ಕಿತ್ತಬೇಕು

ಇಷ್ಟಪಟ್ಟು ನಡೆಯದಿದ್ದರೆ
ಇದು ಬಲು ಕಷ್ಟದ ದಾರಿ

ಧರ್ಮಗ್ರಂಥಗಳ ಹಿಡಿದರೆ
ಎದುರಿದ್ದೂ ಕಾಣದಾ ದಾರಿ

ಮಾತಿನಾಟಕೆ ಸಿಲುಕಿದರೆ
ಮರೆಯಾಗೋ ದಾರಿ

ಅರ್ಥಕ್ಕೆ ಆತುಕೊಂಡರೆ
ಪತ್ತೆಯಾಗದ ದಾರಿ

ಜ್ಞಾನದಾಹಕೆ ಬಾಯ್ತೆರೆದರೆ
ಮರೀಚಿಕೆಯಾಗೋ ದಾರಿ

ಯೋಗದ ಬೆನ್ನ ಬಿದ್ದರೆ
ದೂರ ಉಳಿಯುವ ದಾರಿ

ನಮ್ಮ ಕಗ್ಗಾಡನ್ನು
ನಾವೇ ತರಿಯಬೇಕು
ನಮ್ಮ ಕದಳಿಯ ಹೊಲಬ
ನಾವೇ ಅರಿಯಬೇಕು

ಕೆಚ್ಚಿರಬೇಕು ನಡೆಯುದಕೆ
ಹುಚ್ಚಿರಬೇಕು ಬಿಡೆ ಎನ್ನಲಿಕೆ
ಪಟ್ಟುಹಿಡಿಯಲೇ ಬೇಕು
ಬಾಗದ ಮನಸಿನ ಮುಂದೆ

ಸರಳಾತಿ ಸರಳವಾಗಿದ್ದರೂ
ಸುಲಭದಲಿ ಸಿಗದು
ಹಮ್ಮುಬಿಮ್ಮುಗಳಿಗಂತೂ
ಹತ್ತಿರವೇ ಸುಳಿಯದು
ಅಂತಿಂಥದಲ್ಲ ಈ ಮಹಾದಾರಿ
ಕರುಣೆಯಲಿ ಗುರು ಕೊಟ್ಟ
ಶಿವಪಥಕೊಯ್ಯುವ ಈ ರಹದಾರಿ.

Previous post ಕನ್ನಡಿ ನಂಟು
ಕನ್ನಡಿ ನಂಟು
Next post ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...

Comments 1

  1. Padmalaya
    Oct 11, 2023 Reply

    ಕಿತ್ತಬೇಕು ಅಲ್ಲಮ್ಮಕೀಳಬೇಕು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
Copyright © 2025 Bayalu