Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಾರಿಯಲ್ಲದ ದಾರಿ…
Share:
Poems October 10, 2023 ಕೆ.ಆರ್ ಮಂಗಳಾ

ದಾರಿಯಲ್ಲದ ದಾರಿ…

ಗುರು ತೋರಿದ ದಾರಿಯಲಿ
ಬಂಡೆಗಳ ಸಿಡಿಸಬೇಕು
ಗುಡ್ಡಗಳ ಒಡೆಯಬೇಕು
ಕಮರಿ, ಹೊಳ್ಳ ದಾಟಬೇಕು
ಮುಳ್ಳುಗಂಟಿ ಕಿತ್ತಬೇಕು

ಇಷ್ಟಪಟ್ಟು ನಡೆಯದಿದ್ದರೆ
ಇದು ಬಲು ಕಷ್ಟದ ದಾರಿ

ಧರ್ಮಗ್ರಂಥಗಳ ಹಿಡಿದರೆ
ಎದುರಿದ್ದೂ ಕಾಣದಾ ದಾರಿ

ಮಾತಿನಾಟಕೆ ಸಿಲುಕಿದರೆ
ಮರೆಯಾಗೋ ದಾರಿ

ಅರ್ಥಕ್ಕೆ ಆತುಕೊಂಡರೆ
ಪತ್ತೆಯಾಗದ ದಾರಿ

ಜ್ಞಾನದಾಹಕೆ ಬಾಯ್ತೆರೆದರೆ
ಮರೀಚಿಕೆಯಾಗೋ ದಾರಿ

ಯೋಗದ ಬೆನ್ನ ಬಿದ್ದರೆ
ದೂರ ಉಳಿಯುವ ದಾರಿ

ನಮ್ಮ ಕಗ್ಗಾಡನ್ನು
ನಾವೇ ತರಿಯಬೇಕು
ನಮ್ಮ ಕದಳಿಯ ಹೊಲಬ
ನಾವೇ ಅರಿಯಬೇಕು

ಕೆಚ್ಚಿರಬೇಕು ನಡೆಯುದಕೆ
ಹುಚ್ಚಿರಬೇಕು ಬಿಡೆ ಎನ್ನಲಿಕೆ
ಪಟ್ಟುಹಿಡಿಯಲೇ ಬೇಕು
ಬಾಗದ ಮನಸಿನ ಮುಂದೆ

ಸರಳಾತಿ ಸರಳವಾಗಿದ್ದರೂ
ಸುಲಭದಲಿ ಸಿಗದು
ಹಮ್ಮುಬಿಮ್ಮುಗಳಿಗಂತೂ
ಹತ್ತಿರವೇ ಸುಳಿಯದು
ಅಂತಿಂಥದಲ್ಲ ಈ ಮಹಾದಾರಿ
ಕರುಣೆಯಲಿ ಗುರು ಕೊಟ್ಟ
ಶಿವಪಥಕೊಯ್ಯುವ ಈ ರಹದಾರಿ.

Previous post ಕನ್ನಡಿ ನಂಟು
ಕನ್ನಡಿ ನಂಟು
Next post ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ

Related Posts

ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 1

  1. Padmalaya
    Oct 11, 2023 Reply

    ಕಿತ್ತಬೇಕು ಅಲ್ಲಮ್ಮಕೀಳಬೇಕು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ನನ್ನ ಶರಣರು…
ನನ್ನ ಶರಣರು…
April 9, 2021
ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!
September 14, 2024
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಗುರುಪಥ
ಗುರುಪಥ
January 4, 2020
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಹುಲಿ ಸವಾರಿ…
ಹುಲಿ ಸವಾರಿ…
June 10, 2023
Copyright © 2026 Bayalu