Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಾರಿಯಲ್ಲದ ದಾರಿ…
Share:
Poems October 10, 2023 ಕೆ.ಆರ್ ಮಂಗಳಾ

ದಾರಿಯಲ್ಲದ ದಾರಿ…

ಗುರು ತೋರಿದ ದಾರಿಯಲಿ
ಬಂಡೆಗಳ ಸಿಡಿಸಬೇಕು
ಗುಡ್ಡಗಳ ಒಡೆಯಬೇಕು
ಕಮರಿ, ಹೊಳ್ಳ ದಾಟಬೇಕು
ಮುಳ್ಳುಗಂಟಿ ಕಿತ್ತಬೇಕು

ಇಷ್ಟಪಟ್ಟು ನಡೆಯದಿದ್ದರೆ
ಇದು ಬಲು ಕಷ್ಟದ ದಾರಿ

ಧರ್ಮಗ್ರಂಥಗಳ ಹಿಡಿದರೆ
ಎದುರಿದ್ದೂ ಕಾಣದಾ ದಾರಿ

ಮಾತಿನಾಟಕೆ ಸಿಲುಕಿದರೆ
ಮರೆಯಾಗೋ ದಾರಿ

ಅರ್ಥಕ್ಕೆ ಆತುಕೊಂಡರೆ
ಪತ್ತೆಯಾಗದ ದಾರಿ

ಜ್ಞಾನದಾಹಕೆ ಬಾಯ್ತೆರೆದರೆ
ಮರೀಚಿಕೆಯಾಗೋ ದಾರಿ

ಯೋಗದ ಬೆನ್ನ ಬಿದ್ದರೆ
ದೂರ ಉಳಿಯುವ ದಾರಿ

ನಮ್ಮ ಕಗ್ಗಾಡನ್ನು
ನಾವೇ ತರಿಯಬೇಕು
ನಮ್ಮ ಕದಳಿಯ ಹೊಲಬ
ನಾವೇ ಅರಿಯಬೇಕು

ಕೆಚ್ಚಿರಬೇಕು ನಡೆಯುದಕೆ
ಹುಚ್ಚಿರಬೇಕು ಬಿಡೆ ಎನ್ನಲಿಕೆ
ಪಟ್ಟುಹಿಡಿಯಲೇ ಬೇಕು
ಬಾಗದ ಮನಸಿನ ಮುಂದೆ

ಸರಳಾತಿ ಸರಳವಾಗಿದ್ದರೂ
ಸುಲಭದಲಿ ಸಿಗದು
ಹಮ್ಮುಬಿಮ್ಮುಗಳಿಗಂತೂ
ಹತ್ತಿರವೇ ಸುಳಿಯದು
ಅಂತಿಂಥದಲ್ಲ ಈ ಮಹಾದಾರಿ
ಕರುಣೆಯಲಿ ಗುರು ಕೊಟ್ಟ
ಶಿವಪಥಕೊಯ್ಯುವ ಈ ರಹದಾರಿ.

Previous post ಕನ್ನಡಿ ನಂಟು
ಕನ್ನಡಿ ನಂಟು
Next post ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಬೆಂಕಿಯೊಳಗಣ ಬೆಳಕು
Share:
Poems

ಬೆಂಕಿಯೊಳಗಣ ಬೆಳಕು

June 12, 2025 ಜ್ಯೋತಿಲಿಂಗಪ್ಪ
ನಿಜದ ಮುಖವ ಬಲ್ಲೆಯಾ ಅವರ ಮುಖವ ಇವರು ನೋಡುವುದು ಇವರ ಮುಖವ ಅವರು ನೋಡುವುದು ಅವರವರ ಮುಖವ ಅವರರಿಯರು ಇಚ್ಛೆಯನರಿದು ಮಾತಾಡಿದರೆ ಮೆಚ್ಚುಗೆ ಹನಿ ಹನಿ ಹರಿದು ಹಳ್ಳ ಹಳ್ಳ ಹಳ್ಳ...

Comments 1

  1. Padmalaya
    Oct 11, 2023 Reply

    ಕಿತ್ತಬೇಕು ಅಲ್ಲಮ್ಮಕೀಳಬೇಕು

Leave a Reply to Padmalaya Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುತ್ತೂರಿ…
ತುತ್ತೂರಿ…
June 10, 2023
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಅಂದು-ಇಂದು
ಅಂದು-ಇಂದು
December 8, 2021
ನಾನರಿಯದ ಬಯಲು
ನಾನರಿಯದ ಬಯಲು
April 9, 2021
ಕುರುಹಿಲ್ಲದಾತಂಗೆ ಹೆಸರಾವುದು?
ಕುರುಹಿಲ್ಲದಾತಂಗೆ ಹೆಸರಾವುದು?
February 6, 2019
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
Copyright © 2026 Bayalu