Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಡೆಯ ಎಡೆ…
Share:
Poems April 5, 2026 ಕೆ.ಆರ್ ಮಂಗಳಾ

ನಡೆಯ ಎಡೆ…

ಅತ್ತಿದ್ದು ನಕ್ಕಿದ್ದು
ಒಳಗೊಳಗೇ ಬಿಕ್ಕಿದ್ದು
ಮತ್ತೆ ಜಂಜಡಕೆ ಬೀಳಲಾರೆ ಇನ್ನು
ಎಲ್ಲ ಕಲಿಸುವ ಬದುಕು
ಎಲ್ಲ ತಿಳಿಸುವ ಗುರುವು
ದಾಟಬಲ್ಲೆನು ಈಜಿ ನೂರು ಕಡಲು

ಸುಖ-ದುಃಖ ಬರಹವನು
ಬರೆವ ಕೈಗೆ ನಮಿಸಿ
ತಪ್ಪುಸರಿಗಳ ಲೆಕ್ಕ ಒಪ್ಪಿಸಿರುವೆ
ಸಂಚಯದ ಸಂಚಿಯನು
ಕೊಡವಿ ಖಾಲಿ ಮಾಡಿ
ಅಳಿದುಳಿದುದೆಲ್ಲಾ ಹುರಿದುಬಿಡುವೆ

ಹಿಂದಣದ ಹೊರೆಯಿಲ್ಲ
ಮುಂದಣದ ಹಂಗಿಲ್ಲ
ಸಮತೆಯ ಸಿರಿಯು ಕಂಗೊಳಿಸಲಿ
ಹೊಸ ಹಸಿರು ಹೊಸ ಉಸಿರು
ಹೊಸ ಕಂಪು ಹೊಸ ತಂಪು
ನಡೆಯ ಎಡೆಯಿರಲಿ ನಿತ್ಯಸತ್ಯತೆಗೆ

ಚಳಿಗಾಳಿ ಮಳೆ ಬಿಸಿಲು
ನರನರಗಳೊಳಗಿಳಿದು
ತೂಗಿ ತೊನೆದಿಹುದು ಜೀವತಾನ
ಹಗಲಿರುಳ ತೆರೆಗಳಲಿ
ಋತುಮಾಸ ಕವಲಿನಲಿ
ಹೊರಳಿ ಸಾಗಿಹುದು ಬಾಳಯಾನ

ಆ ಮುಗಿಲು ಬಿದ್ದಾಗ
ಹಸುರೆದ್ದು ಬಂದಾಗ
ಸುಂದರವು ಸೃಷ್ಟಿಯೆಲ್ಲಾ
ಅಂತರವು ಅಳಿದಾಗ
ನಾ ಕರಗಿ ಹೋದಾಗ
ಅಮೃತವು ಮರ್ತ್ಯವೆಲ್ಲಾ…

Previous post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ತುತ್ತೂರಿ…
ತುತ್ತೂರಿ…
June 10, 2023
ಸದ್ಗುರು ಸಾಧಕ ಬಸವಣ್ಣ
ಸದ್ಗುರು ಸಾಧಕ ಬಸವಣ್ಣ
May 6, 2021
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
Copyright © 2026 Bayalu