Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಡೆಯ ಎಡೆ…
Share:
Poems April 5, 2026 ಕೆ.ಆರ್ ಮಂಗಳಾ

ನಡೆಯ ಎಡೆ…

ಅತ್ತಿದ್ದು ನಕ್ಕಿದ್ದು
ಒಳಗೊಳಗೇ ಬಿಕ್ಕಿದ್ದು
ಮತ್ತೆ ಜಂಜಡಕೆ ಬೀಳಲಾರೆ ಇನ್ನು
ಎಲ್ಲ ಕಲಿಸುವ ಬದುಕು
ಎಲ್ಲ ತಿಳಿಸುವ ಗುರುವು
ದಾಟಬಲ್ಲೆನು ಈಜಿ ನೂರು ಕಡಲು

ಸುಖ-ದುಃಖ ಬರಹವನು
ಬರೆವ ಕೈಗೆ ನಮಿಸಿ
ತಪ್ಪುಸರಿಗಳ ಲೆಕ್ಕ ಒಪ್ಪಿಸಿರುವೆ
ಸಂಚಯದ ಸಂಚಿಯನು
ಕೊಡವಿ ಖಾಲಿ ಮಾಡಿ
ಅಳಿದುಳಿದುದೆಲ್ಲಾ ಹುರಿದುಬಿಡುವೆ

ಹಿಂದಣದ ಹೊರೆಯಿಲ್ಲ
ಮುಂದಣದ ಹಂಗಿಲ್ಲ
ಸಮತೆಯ ಸಿರಿಯು ಕಂಗೊಳಿಸಲಿ
ಹೊಸ ಹಸಿರು ಹೊಸ ಉಸಿರು
ಹೊಸ ಕಂಪು ಹೊಸ ತಂಪು
ನಡೆಯ ಎಡೆಯಿರಲಿ ನಿತ್ಯಸತ್ಯತೆಗೆ

ಚಳಿಗಾಳಿ ಮಳೆ ಬಿಸಿಲು
ನರನರಗಳೊಳಗಿಳಿದು
ತೂಗಿ ತೊನೆದಿಹುದು ಜೀವತಾನ
ಹಗಲಿರುಳ ತೆರೆಗಳಲಿ
ಋತುಮಾಸ ಕವಲಿನಲಿ
ಹೊರಳಿ ಸಾಗಿಹುದು ಬಾಳಯಾನ

ಆ ಮುಗಿಲು ಬಿದ್ದಾಗ
ಹಸುರೆದ್ದು ಬಂದಾಗ
ಸುಂದರವು ಸೃಷ್ಟಿಯೆಲ್ಲಾ
ಅಂತರವು ಅಳಿದಾಗ
ನಾ ಕರಗಿ ಹೋದಾಗ
ಅಮೃತವು ಮರ್ತ್ಯವೆಲ್ಲಾ…

Previous post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಮನವೆಂಬ ಸರ್ಪ
ಮನವೆಂಬ ಸರ್ಪ
February 7, 2021
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಭಾರ
ಭಾರ
October 6, 2020
ಕುರುಹೇ ಬಯಲು
ಕುರುಹೇ ಬಯಲು
February 16, 2026
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ
December 3, 2018
ಶಾಂತಿ
ಶಾಂತಿ
April 11, 2025
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
Copyright © 2026 Bayalu